
ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಶುಕ್ರವಾರ ಮುಂಜಾನೆ ಕಂಟೈನರ್ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರು ಅದೃಷ್ಟವಶಾತ್ ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಗಳನ್ನು ಕರೆತರಲು ಹೋಗುತ್ತಿದ್ದಾಗ ದುರಂತ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಸೋಂಪುರ ನಿವಾಸಿ ಹರ್ಷ ಎಂಬವರು ಮಂಗಳೂರಿನ ಕಾಲೇಜಿನಲ್ಲಿ ಓದುತ್ತಿದ್ದ ತಮ್ಮ ಪುತ್ರಿಯನ್ನು, ಭಾರಿ ಮಳೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಿದ ಕಾರಣ ಮನೆಗೆ ಕರೆದುಕೊಂಡು ಹೋಗಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.ಶುಕ್ರವಾರ ಮುಂಜಾನೆ ಸುಮಾರು 6:30ರ ಹೊತ್ತಿಗೆ ಇವರ ಕಾರು ಗುಂಡ್ಯ ಪೇಟೆ ಸಮೀಪದ ತಿರುವು ರಸ್ತೆಗೆ ತಲುಪಿದಾಗ, ಎದುರಿನಿಂದ ಅತಿವೇಗವಾಗಿ ಬಂದ ಕಂಟೈನರ್ ನಿಯಂತ್ರಣ ತಪ್ಪಿ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.ಗಾಯಾಳುಗಳು ಸುರಕ್ಷಿತಗಮನಾರ್ಹ ಸಂಗತಿ: ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಕಾರಿನಲ್ಲಿದ್ದ ಹರ್ಷ ಹಾಗೂ ಅವರ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಹರ್ಷ ಅವರು ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಂಟೈನರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
